ಕಾರಟಗಿ: ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತ ಮಂಜುನಾಥಪ್ಪ ಹನುಮಂತಪ್ಪ ಬರ್ಸಿ ಕುರುಬರ (37) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಮೃತರು ಗ್ರಾಮದಲ್ಲಿ ಜಮೀನು ಹೊಂದಿದ್ದು, ಗಂಗಾವತಿಯ ಎಸ್ಬಿಐ ಬ್ಯಾಂಕ್ನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಕೆಲಸ ಅರಸಿಕೊಂಡು ರಾಜಧಾನಿಗೆ ಹೋಗಿದ್ದರು. ಕೊರೊನಾ ಕಾರಣ ಗ್ರಾಮಕ್ಕೆ ಮರಳಿದ್ದರು. ಪತ್ನಿ ತವರು ಮನೆಗೆ ಹೋಗಿದ್ದರಿಂದ ಗ್ರಾಮದ ಮಾಳಿಂಗರಾಯ ದೇವಸ್ಥಾನದ ಹಿಂದಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರಟಗಿ ಪೊಲೀಸ್ ಠಾಣೆಯಲ್ಲಿ ಪತ್ನಿ ರೇಣುಕಮ್ಮ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.