ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 3:28 IST
Last Updated 9 ಜುಲೈ 2021, 3:28 IST

ಕಾರಟಗಿ: ಪಟ್ಟಣ ಸಮೀಪದ ಜಮೀನಿ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಪಟ್ಟಣದ ವಾರ್ಡ್ ನಂ.1ರ ನಿವಾಸಿ ಬಸವರಾಜ ಭೀಮಣ್ಣ ಡಂಕನಕಲ್‌ ನಾಯಕ (42) ಆತ್ಮಹತ್ಯೆ ಮಾಡಿಕೊಂಡವರು.

ಅವರ ತಂದೆಯ ಹೆಸರಲ್ಲಿ 4.29 ಎಕರೆ ಭೂಮಿ ಇದ್ದು, ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ₹1.45 ಲಕ್ಷ ಹಾಗೂ ಹೊರಗೆ ₹4 ಲಕ್ಷ ಸಾಲ ಮಾಡಿದ್ದರು. ಈಚೆಗೆ ಬೆಳೆನಷ್ಟ ಅನುಭವಿಸಿದ್ದರು. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.