ADVERTISEMENT

ಕೊಪ್ಪಳ: ಮೂರು ಅಂಗಡಿಗಳಿಗೆ‌ ಬೆಂಕಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 5:12 IST
Last Updated 24 ಆಗಸ್ಟ್ 2022, 5:12 IST
   

ಕೊಪ್ಪಳ: ಇಲ್ಲಿನ ಗಡಿಯಾರ ಕಂಬದ ಸಮೀಪದಲ್ಲಿರುವ ‌ಮೂರು ಅಂಗಡಿಗಳಿಗೆ ಬುಧವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿ ಒಳಗಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಎರಡು ಹೋಟೆಲ್ ಮತ್ತು ಒಂದು ತೆಂಗಿನಕಾಯಿ ವ್ಯಾಪಾರದ ಅಂಗಡಿಗಳಲ್ಲಿ ಈ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಘಟನೆ ನಡೆದಿದೆ ಎಂದು‌ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ತಿಳಿಸಿದರು. ಎರಡು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸಿದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.