ಗಂಗಾವತಿ: ತಾಲ್ಲೂಕಿನ ಆನೆಗೊಂದಿ ನವವೃಂದಾವನ ಗಡ್ಡೆಗೆ ಭೇಟಿ ನೀಡಲು ಹೊರಟಿದ್ದ ವಿದೇಶಿ ಪ್ರವಾಸಿಗ ಸೆಲ್ವನಾಥನ್ (67) ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಸಿಂಗಾಪುರ ದೇಶದ ಪ್ರಜೆ ಎಂದು ಗುರುತಿಸಲಾಗಿದೆ. ಮೇ 11ಕ್ಕೆ ಪತ್ನಿ, ಮಕ್ಕಳು ಸಮೇತ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬೆಂಗಳೂರಿಗೆ ಆಗಮಿಸಿದ್ದರು. ಅವರು ಈಚೆಗೆ ಹಂಪಿ, ಸಾಣಾಪುರ, ಅಂಜನಾದ್ರಿ ಬೆಟ್ಟ, ಋಷಿಮುಖ ಪರ್ವತ, ಪಂಪಾಸರೋವರ, ಆದಿಶಕ್ತಿ ದುರ್ಗಾದೇವಿ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.
ನಂತರ ಆನೆಗೊಂದಿ ಗ್ರಾಮಕ್ಕೆ ಭೇಟಿ ನೀಡಿ, ನವ ವೃಂದಾವನ ಗಡ್ಡೆಗೆ ತೆರಳುವ ವೇಳೆಯಲ್ಲಿ ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಆನೆಗೊಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.