ADVERTISEMENT

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ‌ನನಗೆ ಗಂಗಾವತಿ ಕ್ಷೇತ್ರದ ಟಿಕೆಟ್: ಅನ್ಸಾರಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 6:43 IST
Last Updated 27 ಜೂನ್ 2022, 6:43 IST

ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‌ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ನನಗೇ ಟಿಕೆಟ್ ನೀಡಲಿದೆ ಎಂದು‌ ಮಾಜಿ‌ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಜುಲೈ 3ಕ್ಕೆ ಬೆಂಗಳೂರಿಗೆ ಬರಲು ಹೇಳಿದ್ದಾರೆ. ಆಕಾಂಕ್ಷಿಗಳು ಯಾರೇ ಆಗಲಿ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.

ಮುಂದುವರಿದು, ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಬಿಡುವುದಿಲ್ಲ.ಮುಸ್ಲಿಮರೂಕಾಂಗ್ರೆಸ್ ಬೆಂಬಲಿಸಲಿದ್ದಾರೆ.ಕ್ಷೇತ್ರದ ಕುರಿತು ಶಿವಕುಮಾರ್‌ಮಾತನಾಡಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ 85 ಸಾವಿರ ಡಿಜಿಟಲ್ ಸದಸ್ಯತ್ವ ಮಾಡಿಸಿದ್ದೇನೆ.‌ ಹೀಗಾಗಿ‌ ನನಗೇ ಟಿಕೆಟ್ ಸಿಗಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.