ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ನನಗೇ ಟಿಕೆಟ್ ನೀಡಲಿದೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಜುಲೈ 3ಕ್ಕೆ ಬೆಂಗಳೂರಿಗೆ ಬರಲು ಹೇಳಿದ್ದಾರೆ. ಆಕಾಂಕ್ಷಿಗಳು ಯಾರೇ ಆಗಲಿ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.
ಮುಂದುವರಿದು, ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಬಿಡುವುದಿಲ್ಲ.ಮುಸ್ಲಿಮರೂಕಾಂಗ್ರೆಸ್ ಬೆಂಬಲಿಸಲಿದ್ದಾರೆ.ಕ್ಷೇತ್ರದ ಕುರಿತು ಶಿವಕುಮಾರ್ಮಾತನಾಡಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ 85 ಸಾವಿರ ಡಿಜಿಟಲ್ ಸದಸ್ಯತ್ವ ಮಾಡಿಸಿದ್ದೇನೆ. ಹೀಗಾಗಿ ನನಗೇ ಟಿಕೆಟ್ ಸಿಗಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.