ADVERTISEMENT

ಇಸ್ಪೀಟ್‌ ಜೂಜಾಟ; ₹8.12 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 5:44 IST
Last Updated 26 ಏಪ್ರಿಲ್ 2022, 5:44 IST

ಕನಕಗಿರಿ: ಇಲ್ಲಿಗೆ ಸಮೀಪದ ವಿಠಲಾಪುರ ಗ್ರಾಮದ ಗುಡ್ಡದ ಪ್ರದೇಶದಲ್ಲಿ ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ₹8.12 ಲಕ್ಷ ರೂಪಾಯಿ ವಶ ಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ. ಜೂಜಾಟದಲ್ಲಿ‌ ತೊಡಗಿದ್ದ ಎಂಟು ಜನರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಐ ಪರಸಪ್ಪ ಭಜಂತ್ರಿ ತಿಳಿಸಿದ್ದಾರೆ.

ಎಂಟು‌ ಜನರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ದಾಳಿಯಲ್ಲಿ ಪಿಐ ಪರಸಪ್ಪ ಭಜಂತ್ರಿ, ಪಿಎಸ್‌ಐ ಸುನೀಲ ಹಾಗೂ ಪೊಲೀಸರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT