ADVERTISEMENT

ಗಂಗಾವತಿ: ಪ್ರವಾಸಿಗನ ಕೊಲೆ ಪ್ರಕರಣ: ಶಿಕ್ಷೆ ಪ್ರಕಟ ಇಂದು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 6:25 IST
Last Updated 16 ಫೆಬ್ರುವರಿ 2026, 6:25 IST
ತೀರ್ಪು
ತೀರ್ಪು   

ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆ ಬಳಿ ತುಂಗಭದ್ರಾ ಎಡದಂಡೆ ಸಮೀಪ ಕಳೆದ ವರ್ಷ ವಿದೇಶಿ ಮಹಿಳೆ, ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ನಡೆದ ಅತ್ಯಾಚಾರ, ಓರ್ವ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯ ಸೋಮವಾರ (ಫೆ.16) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಈ ಘಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಒಂಬತ್ತು ತಿಂಗಳ ಒಳಗಾಗಿ ಎಲ್ಲ ವಿಚಾರಣೆ ಮುಗಿದಿದ ನಂತರ ಫೆ.6ರಂದು ಗಂಗಾವತಿಯಲ್ಲಿ‌ನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯ ಸಾಯಿ), ಶರಣ ಪ್ಪ (ಶರಣು ಬಸವರಾಜ್) ಎನ್ನುವವರು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿ‌ಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT