ADVERTISEMENT

ಗಂಗಾವತಿ: ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 15:31 IST
Last Updated 1 ಸೆಪ್ಟೆಂಬರ್ 2022, 15:31 IST
   

ಗಂಗಾವತಿ (ಕೊಪ್ಪಳ ಜಿಲ್ಲೆ): ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ದಲಿತ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿವೆ.

ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಪೊಲೀಸ್ ಠಾಣೆ ಮೆಟ್ಟಿಲೇರಿವೆ.

‘ಅಂಬೇಡ್ಕರ್ ಅವರ ರೂಪ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸರಿಯಲ್ಲ. ಇದರಿಂದ ಅವರ ಘನತೆಗೆ ಧಕ್ಕೆ ಉಂಟಾಗಿದೆ. ಮೂರ್ತಿಯನ್ನು ಕೊನೆಯದಾಗಿ ನೀರಿಗೆ ವಿಸರ್ಜನೆ ಮಾಡಲಾಗುತ್ತದೆ. ಇದು ಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ’ ಎಂದು ಒಕ್ಕೂಟದ ಮುಖಂಡರಾದ ಕುಂಟೋಜಿ ಮರಿಯಪ್ಪ ಹೇಳಿದರು.

ADVERTISEMENT

ಸದಸ್ಯರಾದ ದೊಡ್ಡ ಬೋಜಪ್ಪ, ಸಿ.ಕೆ.ಮರಿಸ್ವಾಮಿ, ಹನುಮಂತಪ್ಪ, ಪೂಜಾರಿ ಬಸವರಾಜ, ಹಂಚಿನಾಳ ಹುಸೇನಪ್ಪ, ಮಾಗಿ ಹುಲಗಪ್ಪ, ಕಂಟ್ಯಪ್ಪ, ರವಿ ಆರತಿ , ಸಣ್ಣ ಬೋಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.