ಸರ್ವಧರ್ಮಗಳ ಬೀಡಾದ ಕೊಪ್ಪಳದ ಭಾವೈಕ್ಯದ ನೆಲದಲ್ಲಿ ಈ ಬಾರಿ ನಡೆದ 208ನೇ ಮಹಾರಥೋತ್ಸವಕ್ಕೆ ಸಾಕ್ಷಿಯಾಗಲು ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಸಂಜೆ ವೇಳೆಗೆ ಸಂಖ್ಯೆ ಮತ್ತಷ್ಟು ಏರಿಕೆಯಾಗಿತ್ತು. ಜಾತ್ರೆಯ ಸಂಭ್ರಮದಲ್ಲಿ ಮಿಂದೆದ್ದ ಜನರು ಹರಕೆಗಳನ್ನು ಸಲ್ಲಿಸಿದರು. ಇತ್ತ ಕಡೆ ವ್ಯಾಪಾರ, ವಹಿವಾಟುಗಳು ಜೋರಾಗಿಯೇ ನಡೆಯುತ್ತಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.