ADVERTISEMENT

‘ಕೋವಿಡ್ ಲಸಿಕೆ ಪಡೆಯಿರಿ’–ವಿರುಪಾಕ್ಷಪ್ಪ ಸಿಂಗನಾಳ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 14:35 IST
Last Updated 14 ಜೂನ್ 2021, 14:35 IST
ಗಂಗಾವತಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರಿಗೆ ಕೋವಿಡ್ ಲಸಿಕೆ ನೀಡಲಾಯಿತು
ಗಂಗಾವತಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರಿಗೆ ಕೋವಿಡ್ ಲಸಿಕೆ ನೀಡಲಾಯಿತು   

ಗಂಗಾವತಿ: ಇಲ್ಲಿನ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ಸೋಮವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆ. ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ನಗರಸಭೆ ಸದಸ್ಯ ಉಮೇಶ ಸಿಂಗನಾಳ, ಟಿ.ಸಂಗಪ್ಪ, ತಾಲ್ಲೂಕು ಹಿರಿಯ ಆರೋಗ್ಯ ಸಹಾಯಕ ವಿಜಯ ಪ್ರಸಾದ, ಮಂಜುಳಾ ಸಿ.ಆರ್, ಸಿಬ್ಬಂದಿ ಸರ್ವಮಂಗಳ ಆರ್, ಹನುಮೇಶ ನಾಯಕ, ರಮೇಶ ಸಾಲ್ಮನಿ, ನಿರ್ಮಲಾ ಎ, ಪುಷ್ಪಲತಾ, ಅಂಬಿಕಾ ಹಾಗೂ ರಾಧಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.