ಕೊಪ್ಪಳ: ಕುಷ್ಟಗಿ ತಾಲ್ಲೂಕು ಕಲಾಲಬಂಡಿ ಗ್ರಾಮದ ಬಾಲಕಿ ಅನುಸುಪ್ರಿತಾ ತಾನು ಕೂಡಿಟ್ಟಿದ್ದ ₹3,683 ಅನ್ನು ಪಿಎಂ ಕೇರ್ಸ್ ನಿಧಿಗೆ ನೀಡಿದ್ದಾಳೆ.
ಒಂದನೇ ತರಗತಿ ಮುಗಿಸಿರುವ ಏಳು ವರ್ಷದ ಈ ಬಾಲಕಿ, ಪಾಲಕರು ಕೊಡುತ್ತಿದ್ದ ಚಿಲ್ಲರೆ ಹಣವನ್ನು 8 ತಿಂಗಳಿನಿಂದ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದಳು.
ಸಂಗ್ರಹಗೊಂಡಿದ್ದ ಒಟ್ಟು ₹3,683 ಹಣವನ್ನು ಚೀಲದಲ್ಲಿ ಹಾಕಿಕೊಂಡು ತನ್ನ ತಂದೆ ಚಂದಾಲಿಂಗ ಕಲಾಲಬಂಡಿ ಅವರೊಂದಿಗೆ ತೆರಳಿ ಜಿಲ್ಲಾಧಿಕಾರಿಪಿ.ಸುನೀಲಕುಮಾರ್ ಅವರಿಗೆ ಹಸ್ತಾಂತರಿಸಿದಳು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.