ADVERTISEMENT

ಮಕ್ಕಳ ಸಮಸ್ಯೆ ಆಲಿಸಿದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 12:22 IST
Last Updated 2 ಜನವರಿ 2021, 12:22 IST
ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು
ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು   

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳ ವಿಶೇಷ ಗ್ರಾಮಸಭೆ ಶನಿವಾರ ನಡೆಯಿತು.

ತಾಲ್ಲೂಕಿನ ಆನೆಗೊಂದಿ, ಸಂಗಾಪುರ, ಮಲ್ಲಾಪುರ ಹಾಗೂ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 18 ವರ್ಷದ ವಿಶೇಷ ಅಗತ್ಯವುಳ್ಳ ಮಕ್ಕಳು ಭಾಗವಹಿಸಿದ್ದರು.

ವೇದಿಕೆ ಮೇಲೆ ಮಕ್ಕಳು ಮಾತ್ರ ಅತಿಥಿ ಸ್ಥಾನಗಳನ್ನು ಅಲಂಕರಿಸಿದ್ದರು. ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್‌, ಸಿಡಿಪಿಒ ಗಂಗಪ್ಪ, ತಾ.ಪಂ ಸದಸ್ಯ ವೈ.ರಮೇಶ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಅಂಜನಾದೇವಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು.

ADVERTISEMENT

ನಂತರ ಮಕ್ಕಳಿಗೆ ವಿಶೇಷ ಕ್ರೀಡಾಕೂಟ ನಡೆಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಮಕ್ಕಳು ಹಾಗೂ ಪಾಲಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.