ADVERTISEMENT

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಅನಿಲ ಆಚಾರ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 13:51 IST
Last Updated 19 ಸೆಪ್ಟೆಂಬರ್ 2021, 13:51 IST
ಕುಕುನೂರು ತಾಲ್ಲೂಕಿನ ಬಳಗೇರಿ ಗ್ರಾಮದಲ್ಲಿ ಕಬಡ್ಡಿ ಕ್ರೀಡಾಕೂಟಕ್ಕೆ ಯುವ ಮುಖಂಡ ಅನಿಲ ಆಚಾರ ಚಾಲನೆ ನೀಡಿದರು. (ಎಡದಿಂದ) ಮಂಜುನಾಥ ನಾಡಗೌಡರ್, ಕಳಕಪ್ಪ ಕಂಬಳಿ, ಸಿದ್ದಲಿಂಗಯ್ಯ ಉಳಾಗಡ್ಡಿ ಸೇರಿದಂತೆ ಹಲವರು ಇದ್ದರು
ಕುಕುನೂರು ತಾಲ್ಲೂಕಿನ ಬಳಗೇರಿ ಗ್ರಾಮದಲ್ಲಿ ಕಬಡ್ಡಿ ಕ್ರೀಡಾಕೂಟಕ್ಕೆ ಯುವ ಮುಖಂಡ ಅನಿಲ ಆಚಾರ ಚಾಲನೆ ನೀಡಿದರು. (ಎಡದಿಂದ) ಮಂಜುನಾಥ ನಾಡಗೌಡರ್, ಕಳಕಪ್ಪ ಕಂಬಳಿ, ಸಿದ್ದಲಿಂಗಯ್ಯ ಉಳಾಗಡ್ಡಿ ಸೇರಿದಂತೆ ಹಲವರು ಇದ್ದರು   

ಕುಕನೂರು: ‘ಕ್ರೀಡೆಯಲ್ಲಿ ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ’ ಎಂದು ಯುವ ಮುಖಂಡ ಅನಿಲ ಆಚಾರ ಹೇಳಿದರು.

ತಾಲ್ಲೂಕಿನ ಬಳಗೇರಿ ಗ್ರಾಮದ ಬಳ್ಳೇಶ್ವರ ಯುವಕ ಸಂಘದ ವತಿಯಿಂದ ನಡೆದ ಕಬಡ್ಡಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ. ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪೋಷಕರು ಉತ್ತೇಜನ ನೀಡಬೇಕು. ಮಕ್ಕಳಿಗೆ ಆಸಕ್ತಿಯಿರುವ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ಹೇಳಿದರು.

ADVERTISEMENT

ಪ್ರತಿಯೊಬ್ಬರು ಕ್ರೀಡಾ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.