ADVERTISEMENT

ರೆಡ್ಡಿ ಹೊಸ ಪಕ್ಷದಿಂದ ಬಿಜೆಪಿ ಮೇಲೆ ಏನೂ ಪರಿಣಾಮ ಇಲ್ಲ: ಸಚಿವ ಹಾಲಪ್ಪ ಆಚಾರ್‌

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2022, 12:45 IST
Last Updated 25 ಡಿಸೆಂಬರ್ 2022, 12:45 IST
ಹಾಲಪ್ಪ ಆಚಾರ್‌
ಹಾಲಪ್ಪ ಆಚಾರ್‌   

ಕೊಪ್ಪಳ: ಜನಾರ್ದನ ರೆಡ್ಡಿ ಬಿಜೆಪಿಗಾಗಿ ದುಡಿದಿದ್ದಾರೆ ಎನ್ನುವುದು ನಿಜ. ಆದರೆ, ಅವರು ಹೊಸ ಪಕ್ಷ ಯಾಕೆ ಸ್ಥಾಪನೆ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜನಾರ್ದನ ರೆಡ್ಡಿ ಹೊಸ ಪಕ್ಷದಿಂದ ಬಿಜೆಪಿಗೆ ಏನೂ ಪರಿಣಾಮ ಬೀರುವುದಿಲ್ಲ. ನಮ್ಮ ಪಕ್ಷ ಎಷ್ಟು ಗಟ್ಟಿಯಿದೆ ಎನ್ನುವುದು ಜಗತ್ತಿಗೆ ಗೊತ್ತಿದೆ. ಇದಕ್ಕೆ ಈ ಸಲದ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಸಾಧನೆಯೇ ಸಾಕ್ಷಿ. ಬಹಳಷ್ಟು ವರ್ಷಗಳ ಶ್ರಮದಿಂದ ಬೆಳೆದು ಬಂದ ಪಕ್ಷವಿದು’ ಎಂದರು.

‘ನಮ್ಮ ಪಕ್ಷಕ್ಕಾಗಿ ದುಡಿದವರು ನಮ್ಮಲಿಯೇ ಇರಬೇಕಿತ್ತು ಎನ್ನುವ ಸಹಜ ನಿರೀಕ್ಷೆ ನನಗೂ ಇದೆ. ಪಕ್ಷ ಬಿಟ್ಟು ಬೇರೆ ಪಕ್ಷ ಸ್ಥಾಪನೆ ಮಾಡುವುದಾಗಿ ಹೇಳಿದವರಿಗೆ ಏನು ಹೇಳಬೇಕು’ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.