ಸೂರ್ಯನ ಬೆಳಕಿನ ಕಿರಣಗಳು ಇನ್ನೂ ಭೂಮಿಗೆ ಬಿದ್ದಿರಲಿಲ್ಲ. ಆ ಹೊತ್ತಿಗಾಗಲೇ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಮೇಲೆ ಸಾವಿರಾರು ಹನುಮ ಭಕ್ತರು ‘ಜೈ ಶ್ರೀರಾಮ್’ ಘೋಷಣೆಗಳನ್ನು ಮೊಳಗಿಸುತ್ತಿದ್ದರು. ತಮ್ಮ ಕೊರಳಲ್ಲಿದ್ದ ಗಂಧದ ಮಾಲೆಯನ್ನು ವಿಸರ್ಜನೆ ಮಾಡಿ ಆಂಜನೇಯನ ದರ್ಶನ ಪಡೆದರು. ಇದು ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾನುವಾರ ಬೆಳಗಿನ ಜಾವ ಕಂಡು ಬಂದ ಚಿತ್ರಣ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.