ADVERTISEMENT

ಹನುಮ ಜಯಂತಿ: ಕೊಪ್ಪಳ ಬಳಿಯ ಅಂಜನಾದ್ರಿಗೆ ಭಕ್ತರ ದಂಡು– ಚಿತ್ರಗಳಲ್ಲಿ ನೋಡಿ

ಇಂದು ಹನುಮ ಜಯಂತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2025, 8:00 IST
Last Updated 12 ಏಪ್ರಿಲ್ 2025, 8:00 IST
<div class="paragraphs"><p>ಹನುಮ ಜಯಂತಿ ಅಂಗವಾಗಿ ತಾಲ್ಲೂಕಿನ ಅಂಜನಾದ್ರಿಗೆ ಶನಿವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ  ದರ್ಶನ ಪಡೆದರು.</p></div>

ಹನುಮ ಜಯಂತಿ ಅಂಗವಾಗಿ ತಾಲ್ಲೂಕಿನ ಅಂಜನಾದ್ರಿಗೆ ಶನಿವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದರು.

   

ಈ ಬಾರಿಯ ಹನುಮ ಜಯಂತಿ ಸರ್ಕಾರಿ ರಜೆ ದಿನವಾದ ಎರಡನೆ ಶನಿವಾರ ಬಂದಿರುವುದರಿಂದ ಪ್ರತಿ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಹನುಮ ಭಕ್ತರು ಬೆಟ್ಟಕ್ಕೆ ಬಂದಿದ್ದಾರೆ.

ADVERTISEMENT

ಬೆಳಗಿನ ಜಾವದಿಂದಲೇ ಅಪಾರ ಸಂಖ್ಯೆಯ ಭಕ್ತರು ಪಾದಯಾತ್ರೆ ಮೂಲಕ ಬಂದಿದ್ದರು‌. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಬಂದಿದ್ದಾರೆ.

ಮಾಲಾಧಾರಿಗಳು ಬಂದು ಮಾಲೆ ವಿಸರ್ಜನೆ ಮಾಡಿದರು. ಹನುಮ‌ ದೇವರ ಮೂರ್ತಿಗೆ ಅಭಿಷೇಕ, ಹೂವಿನ ಅಲಂಕಾರ, ವಿದ್ಯುತ್ ಅಲಂಕಾರ ಮಾಡಲಾಗಿದೆ. ಬಂದ ಭಕ್ತರಿಗೆ ದೇವಸ್ಥಾನದ ವತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ರೆಡ್ಡಿ ಭೇಟಿ: ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅಂಜನಾದ್ರಿಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.