ADVERTISEMENT

ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:04 IST
Last Updated 16 ಸೆಪ್ಟೆಂಬರ್ 2020, 5:04 IST
ಕೊಪ್ಪಳ ನಗರದಲ್ಲಿ ಮಂಗಳವಾರ ಸುರಿದ ಮಳೆಯಿಂದ ರಕ್ಷಣೆ ಪಡೆಯುತ್ತಿರುವ ಪಾದಚಾರಿಗಳು
ಕೊಪ್ಪಳ ನಗರದಲ್ಲಿ ಮಂಗಳವಾರ ಸುರಿದ ಮಳೆಯಿಂದ ರಕ್ಷಣೆ ಪಡೆಯುತ್ತಿರುವ ಪಾದಚಾರಿಗಳು   

ಕೊಪ್ಪಳ: ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದೆ. ದಿನವಿಡೀ ಮೋಡಕವಿದು, ವಾತಾವರಣ ತಂಪಾಗಿತ್ತು. ಮಧ್ಯಾಹ್ನ ಆರಂಭವಾದ ಜಿಟಿಜಿಟಿ ಮಳೆ, ಬಳಿಕ ಬಿರುಸಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ನಗರದ ಹಳೆಯ ಪ್ರದೇಶಗಳಲ್ಲಿ ಚರಂಡಿಗಳು ಕಟ್ಟಿಕೊಂಡು ರಸ್ತೆಯ ಮೇಲೆಯೇ ನೀರು ಹರಿಯಿತು. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು. ಭಾಗ್ಯನಗರ, ಕುಕನೂರ, ಯಲಬುರ್ಗಾ ಸುತ್ತಮುತ್ತ
ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT