ADVERTISEMENT

ಅಳವಂಡಿ: ‘ಮಕ್ಕಳ ಕಲಿಕೆಗೆ ಕೈಜೋಡಿಸಿ’

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2023, 16:27 IST
Last Updated 27 ಆಗಸ್ಟ್ 2023, 16:27 IST
ಅಳವಂಡಿ ಸಮೀಪದ ಬೆಳಗಟ್ಟಿ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ನಡೆ ಅಂಗನವಾಡಿ ಕಡೆ ಕಾರ್ಯಕ್ರಮವನ್ನು ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ ಚಾಲನೆ ನೀಡಿದರು
ಅಳವಂಡಿ ಸಮೀಪದ ಬೆಳಗಟ್ಟಿ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ನಡೆ ಅಂಗನವಾಡಿ ಕಡೆ ಕಾರ್ಯಕ್ರಮವನ್ನು ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ ಚಾಲನೆ ನೀಡಿದರು   

ಅಳವಂಡಿ: ‘ಪಾಲಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಕಲಿಕೆಗೆ ಕೈಜೋಡಿಸುವ ಜೊತೆಗೆ ಪ್ರೋತ್ಸಾಹಿಸಬೇಕು’ ಎಂದು ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ ಹೇಳಿದರು.

ಸಮೀಪದ ಬೆಳಗಟ್ಟಿ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿ.ಪಂ ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಕೆಆರ್‌ಡಿಬಿ, ಕಲಿಕೆ ಟಾಟಾ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಅಂಗವಾಗಿ ನಡೆದ ಪೋಷಕರ ನಡೆ ಅಂಗನವಾಡಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಅತಿ ಅವಶ್ಯ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳೊಂದಿಗೆ ಚಟುವಟಿಕೆಯ ಮೂಲಕ ಭಾಗವಹಿಸುವ ಮೂಲಕ ಮಕ್ಕಳ ಮನಸ್ಸನ್ನು ಗೆದ್ದು ಆಟ ಪಾಠ ಮಾಡಿಸಬೇಕು ಎಂದು ಹೇಳಿದರು.

ADVERTISEMENT

ಪ್ರಮುಖರಾದ ಸಾವಿತ್ರಿ ಚಿಲವಾಡಗಿ, ಅಂಗನವಾಡಿ ಕಾರ್ಯಕರ್ತೆಯರಾದ ಸರೋಜಾ ಕೊರ್ಲಗಟ್ಟಿ, ರುಕ್ಮಿಣ ಕುರ್ತಕೋಟಿ, ಸಹಾಯಕಿಯರಾದ ಶೋಭಾ ಪಾಟೀಲ, ಪಕೀರಮ್ಮ, ಆರೋಗ್ಯ ಸುರಕ್ಷತಾಧಿಕಾರಿ ಸುಜಾತಾ ಇಟಗಿ, ಆಶಾ ಕಾರ್ಯಕರ್ತೆ ಜೈತುನಬಿ ಒಂಟಿ ಹಾಗೂ ಬಾಲವಿಕಾಸ ಸಮಿತಿ ಸದಸ್ಯರು, ಪಾಲಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.