ADVERTISEMENT

ಹೇಮಲತಾ ನಾಯಕಗೆ ಒಲಿದ ಅದೃಷ್ಟ: ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 9:48 IST
Last Updated 24 ಮೇ 2022, 9:48 IST
   

ಕೊಪ್ಪಳ: ರಾಜ್ಯ ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಇಲ್ಲಿನ ವಕೀಲೆ, ಮಹಿಳಾ ಪ್ರಧಾನ ಕಾರ್ಯದರ್ಶಿ, ವಕೀಲೆ ಹೇಮಲತಾ ನಾಯಕ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಜಿಲ್ಲೆಯಲ್ಲಿ ಪಕ್ಷ ಕಟ್ಟುವಲ್ಲಿ ದುಡಿದ ಅವರ ಶ್ರಮವನ್ನು ಗುರುತಿಸಿದ ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ.

ನಾಮಪತ್ರ ಸಲ್ಲಿಸಲು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದು ಕಮಲ ಪಾಳಯದಲ್ಲಿ ಉತ್ಸಾಹ ಮೂಡಿಸಿದೆ.

ADVERTISEMENT

ಮಹಿಳಾ ಮುಖಂಡರಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿ ಭಾಗ್ಯನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ್ದಾರೆ.

ಬಿಜೆಪಿ ಮುಖಂಡರು ನಾಯಕ ಅವರನ್ನು ಉತ್ಸಾಹದಿಂದ ಸ್ವಾಗತಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ಕಳುಹಿಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.