ADVERTISEMENT

ಸಕಾಲಿಕವಾಗಿ ಕೂಲಿ ನೀಡಿ

ಜಿಲ್ಲಾ ಪಂಚಾಯಿತಿ ಸಿಇಒ ಫೌಜೀಯಾ ತರುನ್ನಮ್

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 5:40 IST
Last Updated 4 ಆಗಸ್ಟ್ 2021, 5:40 IST
ಕೊಪ್ಪಳ ತಾಲ್ಲೂಕಿನ ಹಿರೇಬಗನಾಳ ಗ್ರಾಮದ ಕಾಸನಕಂಡಿಯಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿರುವ ಕೂಲಿಕಾರ್ಮಿಕರೊಂದಿಗೆ ಜಿ.ಪಂ ಸಿಇಒ ಫೌಜೀಯಾ ತರುನ್ನಮ್‌ ಮಾತನಾಡಿದರು
ಕೊಪ್ಪಳ ತಾಲ್ಲೂಕಿನ ಹಿರೇಬಗನಾಳ ಗ್ರಾಮದ ಕಾಸನಕಂಡಿಯಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿರುವ ಕೂಲಿಕಾರ್ಮಿಕರೊಂದಿಗೆ ಜಿ.ಪಂ ಸಿಇಒ ಫೌಜೀಯಾ ತರುನ್ನಮ್‌ ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಕೊಪ್ಪಳ: ನರೇಗಾ ಸೇರಿದಂತೆ ಪಂಚಾಯಿತಿ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜೀಯಾ ತರುನ್ನಮ್‌ ಸೂಚನೆ ನೀಡಿದರು.

ಅವರು ತಾಲ್ಲೂಕಿನ ಹಿರೇಬಗ ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ಅನುಷ್ಠಾನ ಗೊಳ್ಳುತ್ತಿರುವ ಹಿರೇಕಾಸನ ಕಂಡಿ ಗ್ರಾಮದಲ್ಲಿನ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ನಂತರ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುವ ಕೂಲಿಕಾರರೊಂದಿಗೆ ಕೂಲಿ ಕೆಲಸ ನೀಡುತ್ತಿರುವ ಮತ್ತು ಕೂಲಿ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿರುವ ಕುರಿತು ಕೂಲಿಕಾರಳಾದ ವೃದ್ದೆ ಮಾರೆಮ್ಮ ಇವರ ಜೊತೆ ಚರ್ಚೆ ನಡೆಸಿದರು.

'ಕಾಮಗಾರಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರು ತಮ್ಮ ಮುಖಕ್ಕೆ ಮಾಸ್ಕ್‌ ಧರಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಇದರಿಂದ ಭಯಾನಕ ಮಾರಕವಾದ ಕೊವಿಡ್-19 ತಪ್ಪಿಸಬಹುದಾಗಿದೆ. ಈಗಾಗಲೇ ಹಿರೇಬಗನಾಳ ಗ್ರಾಮ ಪಂಚಾಯಿತಿಯಿಂದ ವಿವಿಧ ಕಾಮಗಾರಿಗಳನ್ನು ಅನುಷ್ಠಾನ ಮಾಡಿರುವ ಕುರಿತುಪಿಡಿಒ ಮತ್ತು ತಾಂತ್ರಿಕ ಸಹಾಯಕರು ವಿವರಿಸಿದರು.

ಕಾಮಗಾರಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಕುಡಿಯುವ ನೀರು ಸೌಲಭ್ಯ ಕುರಿತು ಪರಿಶೀಲಿಸಿದರು. ನರೇಗಾ ಯೋಜನೆಯಡಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಕೂಲಿ ಕೆಲಸ ನಿರ್ವಹಿಸಿ ಆರ್ಥಿಕ ಸಬಲರಾಗ ಬೇಕು ಎಂದು ಮನವಿ ಮಾಡಿದರು.

ನರೇಗಾ ಕೂಲಿಕಾರರಿಗೆ ಎನ್‍ಎಂಆರ್ ಅವಧಿ ಮುಕ್ತಾಯವಾದ ನಂತರ 7 ದಿನಗಳ ಒಳಗಾಗಿ ಕೂಲಿ ಹಣ ಪಾವತಿಸುವುದು ಕಡ್ಡಾಯವಾಗಿ ಇರುವುದರಿಂದ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಪಾವತಿಗೆ ಕ್ರಮವಹಿಸಿ ಎಂದು ಹಾಜರಿದ್ದಸಿಬ್ಬಂದಿಗೆ ಸೂಚಿಸಿದರು.

ನಂತರ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಳಗಳ ಸಂಪರ್ಕ ಕಲ್ಪಿಸಿರುವ ಕುರಿತು ಭೌತಿಕವಾಗಿ ಪರಿಶೀಲಿಸಿ ಫಲಾನುಭವಿಗಳ ಜೊತೆ ಚರ್ಚಿಸಿದರು. ನಂತರ ಹೊನ್ನೂರಮಟ್ಟಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಕಸ ಸಂಗ್ರಹಣೆ ಮತ್ತು ವಿಲೇವಾರಿ ಕುರಿತು ಟಿ.ಜನಾರ್ಧನ ಹುಲಿಗಿ ಅವರ ಜೊತೆ ಪರಿಶೀಲನೆ ನಡೆಸಿದರು.

ಜಿ.ಪಂ.ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾ.ಪಂ. ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ವಿಲಾಸ ಬೋಸ್ಲೆ, ಹುಲಿಗಿ ಗ್ರಾಮ ಪಂಚಾಯತ ಅಧ್ಯಕ್ಷ ಯಮನೂರಪ್ಪ, ಹಿರೇಬಗನಾಳ, ಪಿಡಿಒ ಗುರುಸಿದ್ದಪ್ಪ ಜಲವಾದಿ,ಪರಮೇಶ್ವರಯ್ಯ, ಕೃಷ್ಣಮೂರ್ತಿ ಹಲಗೇರಿ, ದೇವರಾಜ ಪತ್ತಾರ, ಪ್ರವೀಣ ಗದಗ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.