ಗಂಗಾವತಿ: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಕ್ರಮಕಲ್ಲು ಸಾಗಾಟ ಮಾಡುತ್ತಿರುವ ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ಸೋಮವಾರ ಬೆಳಿಗ್ಗೆ 2.30ಕ್ಕೆ ವಶಕ್ಕೆ ಪಡೆದಿದೆ.
ಮಲ್ಲಾಪುರ ಗ್ರಾಮದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುವ ಕುರಿತು ತಹಶೀಲ್ದಾರ್ ಯು.ನಾಗರಾಜ ಅವರ
ಗಮನಕ್ಕೆ ಬಂದಿತ್ತು. ಈ ಕುರಿತು ಹಲವು ಬಾರಿ ಟ್ರ್ಯಾಕ್ಟರ್ಗಳ ಮೇಲೆ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಈ ಭಾಗದಲ್ಲಿ ಕೆಲವರು ಕದ್ದು ಮುಚ್ಚಿ, ದ್ರಾಕ್ಷಿ ಬೆಳೆ ತೋಟಗಳ ಬಳಕೆ ಬೇಕಾಗುವ ಕಲ್ಲು ಕಂಬಗಳನ್ನು ಆಕ್ರಮವಾಗಿ ಸಾಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಏಕಾಏಕಿ ವಾಹನಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ವಾಹನಗಳ ಚಾಲಕರು ಪರಾರಿಯಾಗಿದ್ದು, ಒಂದು ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.
ತಹಶೀಲ್ದಾರ್ ಯು.ನಾಗರಾಜ, ಕಂದಾಯ ನೀರಿಕ್ಷಕ ಮಂಜುನಾಥ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.