ADVERTISEMENT

ಗಂಗಾವತಿ: ಅಕ್ರಮ ಸಾಗಣೆ, ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 4:15 IST
Last Updated 24 ಜೂನ್ 2021, 4:15 IST
ಗಂಗಾವತಿಯ ಚಿಕ್ಕಬೆಣಕಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡರು
ಗಂಗಾವತಿಯ ಚಿಕ್ಕಬೆಣಕಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡರು   

ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡಲು ಮುಂದಾಗಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡರು.

ಚಿಕ್ಕಬೆಣಕಲ್ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಅಧಿಕಾರಿಗಳು ದಾಳಿಯನ್ನು ನಡೆಸಿದರು.

ಲಾರಿಯಲ್ಲಿದ್ದ ಲಕ್ಷಾಂತರ 82 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಗಂಗಾವತಿಯ ರಫೀಖಾನ್, ಮಹೆಬೂಬ್ ಪಾಷಾ ಮತ್ತು ವಿಶ್ವನಾಥ ಎಂಬುವವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಹಶೀಲ್ದಾರ್ ಯು.ನಾಗರಾಜ, ಆಹಾರ ನೀರಿಕ್ಷಕರಾದ ಎಚ್.ಐ.ಬಗಲಿ, ಗ್ರಾಮೀಣ ಠಾಣಾ ಪಿಎಸ್‍ಐ ದೊಡ್ಡಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.