ADVERTISEMENT

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2022, 13:19 IST
Last Updated 1 ಜನವರಿ 2022, 13:19 IST
ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು   

ಕೊಪ್ಪಳ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಶನಿವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಜಕಣಾಚಾರಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.

ADVERTISEMENT

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಜಿ ರವಿಕುಮಾರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎಚ್.ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ ವಸ್ತ್ರದ್, ಸಮಾಜದ ಜಿಲ್ಲಾ ಅಧ್ಯಕ್ಷ ಈಶಪ್ಪ ಬಡಿಗೇರ, ಗೌರವಾಧ್ಯಕ್ಷ ರುದ್ರಪ್ಪ, ತಾಲ್ಲೂಕು ಅಧ್ಯಕ್ಷ ಶೇಖರಪ್ಪ, ಮುಖಂಡರಾದ ಪ್ರಕಾಶ, ಪೂರ್ವಾಚಾರ, ಮುತ್ತಣ್ಣ, ಕಾಳಪ್ಪ, ವಿರೇಶ ಪತ್ತಾರ, ಹಲಗೇರಿ ರುದ್ರಪ್ಪ, ಶ್ರೀಶೈಲಪ್ಪ ಅಳವಂಡಿ, ಉಮೇಶ್ ಪತ್ತಾರ, ಕಲ್ಲೇಶ, ಹಾಲೇಶ, ಮನೋಹರ, ಶಾರಮ್ಮ ಹಾಗೂ ಕಾಳಿಕಾದೇವಿ ಸೇವಾ ಸಮಿತಿ ಸದಸ್ಯರು ಸೇರಿ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.