ADVERTISEMENT

ಗಂಗಾವತಿ: ‘ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ’

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 13:02 IST
Last Updated 29 ಏಪ್ರಿಲ್ 2022, 13:02 IST
ಗಂಗಾವತಿ ತಾಲ್ಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಜೆಎಂ ಕಾಮಗಾರಿಯನ್ನು ತಾ.ಪಂ ಇಒ ಮಹಾಂತಗೌಡ ಪಾಟೀಲ ಪರಿಶೀಲಿಸಿದರು
ಗಂಗಾವತಿ ತಾಲ್ಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಜೆಎಂ ಕಾಮಗಾರಿಯನ್ನು ತಾ.ಪಂ ಇಒ ಮಹಾಂತಗೌಡ ಪಾಟೀಲ ಪರಿಶೀಲಿಸಿದರು   

ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಜೆಎಂ ಯೋಜನೆ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.

ನಂತರ ಮಾತನಾಡಿ,‘ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಪೈಪ್‌ಲೈನ್‌ ವ್ಯವಸ್ಥೆ ಸೇರಿದಂತೆ ನಲ್ಲಿಗಳ ಅಳವಡಿಕೆ ಅಚ್ಚುಕಟ್ಟಾಗಿರಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ನಂತರ ಮನೆ‌ ಮನೆಗೆ ಭೇಟಿ ನೀಡಿ‌ ನಲ್ಲಿ ಹಾಗೂ ಮೀಟರ್‌ಗಳನ್ನು ಪರಿಶೀಲಿಸಿದರು. ಬಾಕಿ ಇರುವ ಕಾಮಗಾರಿಯನ್ನು ಆದಷ್ಟು ವೇಗವಾಗಿ ಪೂರ್ಣಗೊಳಿಸಿ ಎಂದು ತಿಳಿಸಿದರು.

ADVERTISEMENT

ಎಪಿಎಂಸಿಯಲ್ಲಿನ ಬಹುಗ್ರಾಮ ಕುಡಿಯುವ ನೀರು ಸರಬರಾಜು ಘಟಕ ವೀಕ್ಷಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವತ್ಸಲಾ, ತಾಂತ್ರಿಕ ಸಂಯೋಜಕ ಬಸವರಾಜ, ಐಇಸಿ ಸಂಯೋಜಕ ಸೋಮನಾಥ ನಾಯಕ, ತಾಂತ್ರಿಕ ಸಹಾಯಕ ಸೈಯದ್ ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಗಂಗಪ್ಪ ಹಾಗೂ ಗಿರಿಧರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.