ADVERTISEMENT

ಕೆರೆ ಅಭಿವೃದ್ಧಿಗೆ ಕೈಜೋಡಿಸಿ ಜಿ.ಪಂ ಸಿಇಒ ಫೌಜಿಯಾ ತರುನ್ನುಮ್‌ ಸೂಚನೆ

ಗಿಣಿಗೇರಾ: ಜಿ.ಪಂ ಸಿಇಒ ಫೌಜಿಯಾ ತರುನ್ನುಮ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 1:55 IST
Last Updated 19 ಆಗಸ್ಟ್ 2021, 1:55 IST
ಕೊಪ್ಪಳ ತಾಲ್ಲೂಕಿನ ಗಿಣಗೇರಾ ಕೆರೆಗೆ ಜಿ.ಪಂ. ಸಿಇಒ ಫೌಜೀಯಾ ತರುನ್ನುಮ್ ಭೇಟಿ ನೀಡಿ ಪರಿಶೀಲಿಸಿದರು
ಕೊಪ್ಪಳ ತಾಲ್ಲೂಕಿನ ಗಿಣಗೇರಾ ಕೆರೆಗೆ ಜಿ.ಪಂ. ಸಿಇಒ ಫೌಜೀಯಾ ತರುನ್ನುಮ್ ಭೇಟಿ ನೀಡಿ ಪರಿಶೀಲಿಸಿದರು   

ಕೊಪ್ಪಳ: ಗಿಣಿಗೇರಾ ಗ್ರಾಮದ ಕೆರೆಯು ದೊಡ್ಡ ಕೆರೆ. ನರೇಗಾ ಯೋಜನೆಯಡಿ ಅಗತ್ಯವಾದ ಕಾಮಗಾರಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಂಡು ವಿನೂತನ ಹಾಗೂ ಮಾದರಿ ಕೆರೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಗಿಣಿಗೇರಾ ಗ್ರಾಮದಲ್ಲಿ ತೋಟಗಾರಿಕೆ, ಅರಣ್ಯ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮಾಡಿದರು.

ಗಿಣಿಗೇರಾ ಕೆರೆಯನ್ನು ಮಾದರಿ ಕೆರೆಯನ್ನಾಗಿ ನಿರ್ಮಿಸಲು ಗವಿಮಠದ ಶ್ರೀಗಳು ಪಣ ತೊಟ್ಟಿದ್ದಾರೆ. ಕೆರೆಯಲ್ಲಿ ಇಕೋ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಈಗಾಗಲೇ ಗ್ರಾಮ ಪಂಚಾಯಿತಿಯಿಂದ ಕೆರೆಗೆ ಸಂಪರ್ಕಿಸುವ ಎಲ್ಲ ನಾಲಾಗಳಲ್ಲಿ ನರೇಗಾ ಯೋಜನೆಯಡಿ ಹೂಳೆತ್ತಲಾಗಿದೆ. ಇದರಿಂದ ಕೆರೆಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹವಾಗುತ್ತದೆ. ಗ್ರಾಮ ಪಂಚಾಯಿತಿಯಿಂದ ಅಗತ್ಯವಾದ ಎಲ್ಲ ಸಹಕಾರ ಪಡೆದು ಗಿಣಿಗೇರಾ ಕೆರೆ ಮಾದರಿಯಾಗಿ ಮಾಡಲಾಗುವುದು. ಈ ಕೆರೆಗೆ ಅಗತ್ಯವಾದ ಎಲ್ಲವನ್ನು ಸಿದ್ಧಪಡಿಸಿಕೊಂಡು ವಿಳಂಬಕ್ಕೆ ಅವಕಾಶ ನೀಡದೆ ಕಾಮಗಾರಿ ಮುಕ್ತಾಯಗೊಳಿಸಬೇಕು ಎಂದರು. ಉಪಕಾರ್ಯದರ್ಶಿ ಶರಣಬಸವರಾಜ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಕೃಷ್ಣ ಉಕ್ಕುಂದ, ತಾಲ್ಲೂಕು ಪಂಚಾಯಿತಿ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸ್ ಬೋಸ್ಲೆ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಮೇಶ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ, ಸಾಮಾಜಿಕ ವಲಯ ಉಪಅರಣ್ಯಾಧಿಕಾರಿ ಅಬ್ದುಲ್ಲಾ, ಕಿರಿಯಎಂಜಿನಿಯರ್ ನರೇಶ್, ಗಿಣಿಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಡೊಳ್ಳಿನ, ಸದಸ್ಯ ಕರಿಯಪ್ಪ ಮೇಟಿ, ಕೆರೆ ಸಮಿತಿ ಅಧ್ಯಕ್ಷ ಸುಬ್ಬಣ್ಣಾಚಾರ್ಯ ವಿದ್ಯಾನಗರ,ಪಿಡಿಒ ಮಂಜುಳಾ ಹೂಗಾರ್, ತಾಂತ್ರಿಕ ಸಂಯೋಜಕ ಬಸವರಾಜ, ತಾಂತ್ರಿಕ ಸಹಾಯಕ ಕೃಷ್ಣ ಸಜ್ಜನ ಹಾಗೂ ಸಿಬ್ಬಂದಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.