ADVERTISEMENT

ಪಂಪಾ ವಿರೂಪಾಕ್ಷೇಶ್ವರಸ್ವಾಮಿ ಕಲ್ಯಾಣೋತ್ಸವ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 12:08 IST
Last Updated 16 ಫೆಬ್ರುವರಿ 2021, 12:08 IST
ಗಂಗಾವತಿಯ ಹಿರೇಜಂತಕಲ್‌ನಲ್ಲಿ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿಯ ಕಲ್ಯಾಣೋತ್ಸವ ಮಂಗಳವಾರ ಜರುಗಿತು
ಗಂಗಾವತಿಯ ಹಿರೇಜಂತಕಲ್‌ನಲ್ಲಿ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿಯ ಕಲ್ಯಾಣೋತ್ಸವ ಮಂಗಳವಾರ ಜರುಗಿತು   

ಗಂಗಾವತಿ: ನಗರದ ಹಿರೇಜಂತಕಲ್‌ನ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವ ಮಂಗಳವಾರ ಜರುಗಿತು.

ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಪಾ ವಿರೂಪಾಕ್ಷನಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ನಂತರ ದೇವಸ್ಥಾನದ ಆವರಣದಲ್ಲಿ ಪಂಪಾ ವಿರೂಪಾಕೇಶ್ವರ ಸ್ವಾಮಿ ಮತ್ತು ಪಾರ್ವತಿ ದೇವಿಯ ಕಲ್ಯಾಣೋತ್ಸವ ಜರುಗಿತು. ತಹಶೀಲ್ದಾರ್‌ ಎಂ.ರೇಣುಕಾ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದರು.

ADVERTISEMENT

ನಗರಸಭೆ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಅರ್ಚಕರಾದ ರಾಯಸ್ಥ ರಂಗಾಚಾರ್ಯ, ಪವನ ಜೋಶಿ, ಅನಿಲ್, ಅನಂತ ಸಿದ್ದಾಂತಿ, ಪ್ರಮುಖರಾದ ನಾಗರಾಜ, ಸೋಮಪ್ಪ ಹಾಗೂ ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.