ADVERTISEMENT

ವಡ್ಡರಹಟ್ಟಿ: ಕನಕದಾಸ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2023, 14:18 IST
Last Updated 31 ಡಿಸೆಂಬರ್ 2023, 14:18 IST
ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಹಾಲು ಮತ ಸಮಾಜದಿಂದ ಭಾನುವಾರ ಕನಕದಾಸ ಜಯಂತಿ ಜರುಗಿತು.
ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಹಾಲು ಮತ ಸಮಾಜದಿಂದ ಭಾನುವಾರ ಕನಕದಾಸ ಜಯಂತಿ ಜರುಗಿತು.   

ಗಂಗಾವತಿ: ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರು ದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ಮಾಜಿ ಎಂಎಲ್ಸಿ ಎಚ್.ಆರ್ ಶ್ರೀನಾಥ ಹೇಳಿದರು.

ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಹಾಲುಮತ ಸಮಾಜ ದಿಂದ ಭಾನುವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರ ಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನ ತೆ ದೃಷ್ಡಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.

ADVERTISEMENT

ನಂತರ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ 108 ಕುಂಭ, ಕಳಸಗಳಿಂದ ಕನಕದಾ ಸರ ಭಾವಚಿತ್ರ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.

ವಿದ್ಯಾನಿಕೇತನ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಹಾಲುಮತ ಸಮಾಜದ ಯಮನಪ್ಪ ವಿಠಲಾಪೂರ, ಸಣ್ಣಕ್ಕಿ ನೀಲಪ್ಪ ಸೇರಿ ಹಾಲುಮತ ಸಮಾಜದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.