ಕನಕಗಿರಿ: ಸಮೀಪದ ನವಲಿ ಗ್ರಾಮದ ರೈಸ್ ಟೆಕ್ ಪಾರ್ಕ್ ಪರಿಸರದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಕಾರಟಗಿಯ ಇಂದಿರಾನಗರದಿಂದ ತಾಲ್ಲೂಕಿನ ಶಿರಿವಾರ ಗ್ರಾಮದಲ್ಲಿ ನಡೆಯಲಿದ್ದ ಹೋಳಿಗೆ ಊಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್ನಲ್ಲಿ ಬರುತ್ತಿದ್ದರು ಎನ್ನಲಾಗುತ್ತಿದೆ.
ಅಂಬಮ್ಮ ಚೌಡ್ಕಿ(50), ಯಮನಪ್ಪ ಸಿಂಧನೂರು(36) ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ದೇವಮ್ಮ(70), ಶೇಷಪ್ಪ (55) ಅವರು ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಗೆ ಕಳಿಸಲಾಗಿದೆ.
ಮೃತಪಟ್ಟ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ಘಟನೆ ನಡೆದ ಸ್ಥಳದಲ್ಲಿ ಗಾಯಾಳುಗಳನ್ನು ಹಾರೈಕೆ ಮಾಡಿದರು.
ಡಿವೈಎಸ್ಪಿ ರುದ್ರೇಶ ಉಜ್ಜಿನಕೊಪ್ಪ, ಪಿಐ ಪರಸಪ್ಪ ಭಜಂತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.