ಗಂಗಾವತಿ (ಕೊಪ್ಪಳ ಜಿಲ್ಲೆ): ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗುರುವಾರ ಇಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.
ಬಳ್ಳಾರಿ ಜಿಲ್ಲೆಯ ಸಿರಗುಪ್ಪಕ್ಕೆ ಟಿ. ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಎಸ್ಸಿ ಮೀಸಲು ಕ್ಷೇತ್ರ ಕನಕಗಿರಿಗೆ ಡಾ. ಚಾರುಲ್ ದಾಸರಿ, ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರಕ್ಕೆ ಶ್ರೀಕಾಂತ್, ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಎಚ್. ಮಹೇಶ್ ಅವರನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ಕೊಟ್ಟು ಪ್ರಚಾರ ನಡೆಸುತ್ತಿರುವ ರೆಡ್ಡಿ ಈ ಭಾಗದ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಅಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಕೊಂಡು ಬಂದಿದ್ದಾರೆ. ಈಗಾಗಲೇ ಸ್ಥಳೀಯವಾಗಿ ಟಿಕೆಟ್ ನೀಡುವ ಬಗ್ಗೆಯೂ ಇವರಿಗೆ ಭರವಸೆ ನೀಡಿದ್ದರು. ಆ ಹೆಸರುಗಳನ್ನು ಈಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.