ADVERTISEMENT

ರಾಜ್ಯದಲ್ಲಿ ಎಎಪಿಗೆ ಉತ್ತಮ ಬೆಂಬಲ: ಲೋಹಿತಕುಮಾರ ರಾಮಶೆಟ್ಟಿ

​ಪ್ರಜಾವಾಣಿ ವಾರ್ತೆ
Published 29 ಮೇ 2022, 4:59 IST
Last Updated 29 ಮೇ 2022, 4:59 IST
ಯಲಬುರ್ಗಾ ತಾಲ್ಲೂಕು ಮುಧೋಳ ಗ್ರಾಮದಲ್ಲಿ ಆಮ್‍ಆದ್ಮಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು
ಯಲಬುರ್ಗಾ ತಾಲ್ಲೂಕು ಮುಧೋಳ ಗ್ರಾಮದಲ್ಲಿ ಆಮ್‍ಆದ್ಮಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು   

ಯಲಬುರ್ಗಾ: ‘ರಾಜ್ಯದಲ್ಲಿಯೂ ದೆಹಲಿ ಮತ್ತು ಪಂಜಾಬ್‌ ಮಾದರಿಯ ಸರ್ಕಾರ ರಚನೆಯಾಗಬೇಕಾದರೆ ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು’ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಲೋಹಿತಕುಮಾರ ರಾಮಶೆಟ್ಟಿ ಹೇಳಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಾತನಾಡಿ,‘ದೇಶದ ವಿವಿಧೆಡೆ ಎಎಪಿ ಉತ್ತಮ ಆಡಳಿತ ನೀಡುತ್ತಿದೆ. ಭ್ರಷ್ಟಾಚಾರ ರಹಿತ ಪಕ್ಷವಾಗಿರುವ ಎಎಪಿಯನ್ನು ಬೆಂಬಲಿಸಿದರೆ ರಾಜ್ಯವೂ ಅಭಿವೃದ್ಧಿಯಾಗುತ್ತದೆ’ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎಎಪಿ ಪ್ರಬಲ ಪಕ್ಷವಾಗಿ ರೂಪುಗೊಳ್ಳುತ್ತಿದೆ ಎಂದರು.

ADVERTISEMENT

ಈಗಾಗಲೇ ಪ್ರತಿಯೊಂದು ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ತಂಡಗಳನ್ನು ರಚಿಸಿ ಸದಸ್ಯತ್ವ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಆಶೋಕ ತಳಕಲ್, ಕೂಕನೂರು ಘಟಕದ ಅಧ್ಯಕ್ಷ ಮಂಜುನಾಥ ಪೂಜಾರ, ಅಮನ್ ಸೇರಿ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.