ADVERTISEMENT

ಕೊಪ್ಪಳ: ಕೆರೆಯಲ್ಲಿ ಮುಳುಗಿ ಕೇರಳ ಪ್ರವಾಸಿಗ ಸಾವು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 17:36 IST
Last Updated 19 ಡಿಸೆಂಬರ್ 2025, 17:36 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಸಾಣಾಪುರ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಕೇರಳದಿಂದ ಬಂದಿದ್ದ ಪ್ರವಾಸಿಗ ಮುಳುಗಿ ಶುಕ್ರವಾರ ಮೃತಪಟ್ಟಿದ್ದಾನೆ.

ADVERTISEMENT

ಪ್ರವಾಸಕ್ಕಾಗಿ ಬಂದಿದ್ದ ಶೈರಿಲ್‌ ಜೋಶ್‌ (34) ಒಂದು ದಿನ ಬಸಾಪುರದಲ್ಲಿ ವಾಸವಾಗಿ, ಡಿ. 17ರಂದು ತಾಣಗಳ ಸುತ್ತಾಟಕ್ಕೆ ಹೊರಗಡೆ ಹೋಗಿದ್ದಾಗ ನಾಪತ್ತೆಯಾಗಿದ್ದರು. ಈ ಕುರಿತು ಮುನಿರಾಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎರಡು ದಿನಗಳ ನಿರಂತರ ಕಾರ್ಯಾಚರಣೆ  ಬಳಿಕ ಶುಕ್ರವಾರ ಸಾಣಾಪುರ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.