ADVERTISEMENT

ಕೊಪ್ಪಳ: ಭಗತ್‌ಸಿಂಗ್‌ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 16:01 IST
Last Updated 28 ಸೆಪ್ಟೆಂಬರ್ 2022, 16:01 IST
ಕೊಪ್ಪಳದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ನಾಯಕ ಶರಣು ಗಡ್ಡಿ ಮಾತನಾಡಿದರು
ಕೊಪ್ಪಳದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ನಾಯಕ ಶರಣು ಗಡ್ಡಿ ಮಾತನಾಡಿದರು   

ಕೊಪ್ಪಳ: ನಗರದ ಸರ್ವೋದಯ ಐಟಿಐ ಕಾಲೇಜಿನಲ್ಲಿ ಬುಧವಾರ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಭಗತ್‌ಸಿಂಗ್‌ ಅವರ 115ನೇ ಜನ್ಮದಿನ ಆಚರಿಸಲಾಯಿತು.

ಸಂಘಟನೆಯ ರಾಜ್ಯ ನಾಯಕ ಶರಣು ಗಡ್ಡಿ ಮಾತನಾಡಿ ‘ಭಾರತದ ಸ್ವಾತಂತ್ರ್ಯ ಹೋರಾಟದ ಚಳವಳಿಯ ಕ್ರಾಂತಿಕಾರಿಗಳಲ್ಲಿ ಸಮಾನತೆ, ವರ್ಗ ಸಂಘರ್ಷದ ಸಿದ್ದಾಂತವನ್ನು ಅರ್ಥಮಾಡಿಕೊಂಡು ಸ್ವಾತಂತ್ರವೆಂದರೆ ಕೇವಲ ಯಜಮಾನರ ಬದಲಾವಣೆಯಲ್ಲ. ಬಿಳಿ ಸಾಹೇಬರು ಕುಳಿತ ಜಾಗದಲ್ಲಿ ಕರಿ ಸಾಹೇಬರು ಕುಳಿತುಕೊಳ್ಳುವುದಲ್ಲ ಎಂದು ನಂಬಿಕೊಂಡಿದ್ದರು’ ಎಂದರು.

ಕಾಲೇಜಿನ ಉಪನ್ಯಾಸಕರಾದ ಮಹಮ್ಮದ್ ಶಫಿ, ಶಾಂತವೀರ, ಯಮನೂರ, ಸಂಘಟನೆಯ ಜಿಲ್ಲಾ ಅಧ್ಯಕ್ಷ ರಮೇಶ್ ವಂಕಲಕುಂಟಿ, ಕಾರ್ಯಕರ್ತರಾದ ಮಹಾಂತೇಶ್ ಮೇಟಿ, ಸಂಗಮೇಶ ಹಾಗೂ ವಿದ್ಯಾರ್ಥಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.