ADVERTISEMENT

ಕೊಪ್ಪಳ: ಸ್ವಾತಂತ್ರ್ಯ ಹೋರಾಟಗಾರ ಶರಣ ಬಸವ ಬಿಸರಳ್ಳಿ ನಿಧನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 6:58 IST
Last Updated 17 ಅಕ್ಟೋಬರ್ 2021, 6:58 IST
ಶರಣಬಸವರಾಜ ಬಿಸರಳ್ಳಿ
ಶರಣಬಸವರಾಜ ಬಿಸರಳ್ಳಿ   

ಕೊಪ್ಪಳ: ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರ, ವಿಮೋಚನಾ ಚಳವಳಿಯ ಮುಂದಾಳು, ನಿವೃತ್ತ ಶಿಕ್ಷಕ ಶರಣ ಬಸವರಾಜ ಬಿಸರಳ್ಳಿ (94) ವಯೋ ಸಹಜ ಕಾಯಿಲೆಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಬಿಸರಳ್ಳಿ ಅವರು ಹಂಪಿ ಕನ್ನಡ ವಿವಿಯಿಂದ ತಮ್ಮ 84ನೇ ವಯಸ್ಸಿನಲ್ಲಿ ಪಿಎಚ್ಡಿ ಪದವಿ ಪಡೆದು ದೇಶದ ಗಮನ ಸೆಳೆದಿದ್ದರು. ಸತತ ಅಧ್ಯಯನಶೀಲರಾಗಿದ್ದ ಅವರು ಕೆಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ನಗರದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಯುವಕರನ್ನು ನಾಚಿಸುವಂತೆ ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿ ಪ್ರೇರಣೆಯಾಗಿದ್ದರು.

ADVERTISEMENT

ತಮ್ಮ ಹೆಸರಿನಲ್ಲಿ ಟ್ರಸ್ಟ್ ರಚಿಸಿ ಅದರ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದರು.

ತಾಲ್ಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಸಂಜೆ 4ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.