ADVERTISEMENT

ಕೊಪ್ಪಳ: ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 12:58 IST
Last Updated 3 ಏಪ್ರಿಲ್ 2024, 12:58 IST
ಕೊಪ್ಪಳ ತಾಲ್ಲೂಕಿನ ವಣ ಬಳ್ಳಾರಿ ಗ್ರಾಮದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು
ಕೊಪ್ಪಳ ತಾಲ್ಲೂಕಿನ ವಣ ಬಳ್ಳಾರಿ ಗ್ರಾಮದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು   

ಕೊಪ್ಪಳ: ಕೊಪ್ಪಳ ತಾಲ್ಲೂಕು ಪಂಚಾಯಿತಿ ವತಿಯಿಂದ ವಣ ಬಳ್ಳಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿನ್ನಾಪುರ ಚಿಕ್ಕತಾಂಡಾ ಹಾಗು ದೊಡ್ಡ ತಾಂಡಾದಲ್ಲಿ ಮಂಗಳವಾರ ‘ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ’ ನಡೆಯಿತು.

ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ ‘ಬರಗಾಲ ಇರುವುದರಿಂದ ಕೂಲಿ ಬಯಸಿ ಬೇರೆ ಕಡೆಗೆ ಗುಳೆ ಹೋಗುವುದನ್ನು ತಡೆದು ಸ್ಥಳಿಯವಾಗಿ ನಿರಂತರವಾಗಿ 60 ದಿನಗಳ ಕೂಲಿ ಕೆಲಸ ನೀಡುವ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ ಆಯುಕ್ತಾಲಯವು ಈ ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದೆ‘ ಎಂದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಶೈಲಪ್ಪ, ಡಿಇಒ ಬಸವರಾಜ ಕುರಿ, ಕಾಯಕ ಮಿತ್ರ ಸುನಿತಾ ಸಂಗಳದ, ನರೇಗಾ ಸಹಾಯಕ ಶಾಂತಪ್ಪ ಮ್ಯಾದನೇರಿ, ತಾಂಡಾದ ಗೋವಿಂದಪ್ಪ, ಗಂಗಾಧರ ಪೂಜಾರ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.