ADVERTISEMENT

ಕೊಪ್ಪಳ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ಚಿತ್ತಾ ಮಳೆ: ಬೆಳೆ ಹಾನಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 6:46 IST
Last Updated 19 ಅಕ್ಟೋಬರ್ 2019, 6:46 IST
ರಾತ್ರಿ ಸುರಿದ ಮಳೆಗೆ ಕೊಪ್ಪಳ ತಾಲ್ಲೂಕಿನ ಲಿಂಗದಳ್ಳಿ ಗ್ರಾಮದ ರೈತರ ಭತ್ತದ ಬೆಳೆ ನೆಲಕಚ್ಚಿದೆ.
ರಾತ್ರಿ ಸುರಿದ ಮಳೆಗೆ ಕೊಪ್ಪಳ ತಾಲ್ಲೂಕಿನ ಲಿಂಗದಳ್ಳಿ ಗ್ರಾಮದ ರೈತರ ಭತ್ತದ ಬೆಳೆ ನೆಲಕಚ್ಚಿದೆ.   

ಕೊಪ್ಪಳ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 11.45ಕ್ಕೆ ಆರಂಭವಾದ ಮಳೆ ಶನಿವಾರ ಬೆಳಿಗ್ಗೆ 8ರವರೆಗೆ ಬಿಟ್ಟು ಬಿಡದೇ ಸುರಿಯಿತು.

ಬೇವಿನಹಳ್ಳಿ, ಲಿಂಗದಹಳ್ಳಿ ಮತ್ತು ಶಹಪುರ ಗ್ರಾಮಗಳ ವ್ಯಾಪ್ತಿರೈತರು ಬೆಳೆದ ಭತ್ತ ನೆಲಕ್ಕೊರಗಿದೆ.

ತೆನೆ ತುಂಬಿ ನಿಂತಿದ್ದ ಬೆಳೆಗಳು ನೆಲಕ್ಕೊರಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ರೈತರು ಕಂಗಾಲಾಗಿದ್ದರೆ. ಹಿರೇಹಳ್ಳ ಜಲಾಶಯ ಭರ್ತಿಯಾಗಿದ್ದು, ಮೂರು ಗೇಟ್‌ಗಳನ್ನು ತೆಗೆಯಲಾಗಿದೆ. ವ್ಯಾಪಕ ಪ್ರಮಾಣದ ನೀರನ್ನು ಹೊರಕ್ಕೆ ಹರಿಬಿಡಲಾಗುತ್ತಿದೆ.

ADVERTISEMENT

ಹಿರೇಹಳ್ಳ ಮೈದುಂಬಿ ಹರಿಯುತ್ತಿದೆ. ಕೆರೆಕಟ್ಟೆಗಳು ಸಂಪೂರ್ಣ ಭರ್ತಿಯಾಗಿವೆ. ಹಳ್ಳದ ದಂಡೆಯ ಜಮೀನುಗಳಿಗೆ ನೀರು ನುಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.