ಕೊಪ್ಪಳ: ಪತಿಯ ಮೇಲಿನ ಕೋಪಕ್ಕೆ ಮಹಿಳೆಯೊಬ್ಬರು 16 ತಿಂಗಳ ಮಗನನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ನಡೆದಿದೆ.
ಅಭಿನವ ಮೃತ ಮಗು. ಕವಿತಾ ಅಲಿಯಾಸ್ ಪ್ರತಿಮಾ ಮಗುವನ್ನು ಕೊಂದಾಕೆ. ಬೆಳಿಗ್ಗೆ ಗಂಡ ಕೆಲಸಕ್ಕೆ ತೆರಳಿದಾಗ ಈ ದುಷ್ಕೃತ್ಯ ಎಸಗಿದ್ದಾರೆ.
ಸಂಜೆ ಪತಿ ಮನೆಗೆ ಬಂದ ಬಳಿಕ ವಿಷಯ ತಿಳಿದು ಬಂದಿದ್ದು, ಕವಿತಾಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಹಿಳೆಯ ವಿಚಾರಣೆ ನಡೆಯುತ್ತಿದೆ.
ಪತಿ ಸರಿಯಾಗಿ ದುಡಿಯುತ್ತಿಲ್ಲ ಎಂಬಕಾರಣಕ್ಕೆ ಈ ದುಷ್ಕೃತ್ಯ ಎಸಗಿದ ಕವಿತಾ, ಹಿಂದೆಯೂ ಕೆಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.