ಗಂಗಾವತಿ: ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಬಸವರಾಜ ದಢೇಸೂಗೂರು ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಶಾಸಕ ಬಸವರಾಜ ದಢೇಸೂಗೂರು ಮಾತನಾಡಿ ಸಹಕಾರ ಸಂಘದ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಗ್ರಾಮಸ್ಥರು ಕೂಡ ಕೋವಿಡ್ ಕುರಿತು ಜಾಗೃತಿ ವಹಿಸಬೇಕು. ಅನಾವಶ್ಯಕವಾಗಿ ಯಾರು ತಿರುಗಾಡಬಾರದು ಎಂದರು.
ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಟಾರಿ ಜಗನ್ನಾಥ್, ಪ್ರಮುಖರಾದ ಸತ್ಯನಾರಾಯಣ, ಬಿ.ರಾಜಶೇಖರ್, ಗಂಗಮ್ಮ, ಶಿವಕುಮಾರ್, ಶರಣಯ್ಯ ಸ್ವಾಮಿ, ಬಿ.ಮಂಜುನಾಥ್, ಯಮನೂರ, ರಾಘವೇಂದ್ರ ಕುಲಕರ್ಣಿ, ಸೋಮನಗೌಡ, ಕನಕರಾಯ, ಯಲ್ಲಪ್ಪ ಎಸ್, ಲಕ್ಷ್ಮಣ ಹಾಗೂ ದುರುಗಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.