ADVERTISEMENT

ಅಸ್ಪೃಶ್ಯತೆ ಆಚರಣೆ ಬಿಡಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2021, 2:12 IST
Last Updated 2 ಅಕ್ಟೋಬರ್ 2021, 2:12 IST
ಅವವಂಡಿ ಸಮೀಪದ ತಿಗರಿ ಗ್ರಾಮದಲ್ಲಿ ಅಸ್ಪೃಶ್ಯತಾ ನಿವಾರಣೆ ಕುರಿತು ನಡೆದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಿಶೋರ್ ವಿಕಾಸ ಸುರಳ್ಕರ ಮಾತನಾಡಿದರು.
ಅವವಂಡಿ ಸಮೀಪದ ತಿಗರಿ ಗ್ರಾಮದಲ್ಲಿ ಅಸ್ಪೃಶ್ಯತಾ ನಿವಾರಣೆ ಕುರಿತು ನಡೆದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಿಶೋರ್ ವಿಕಾಸ ಸುರಳ್ಕರ ಮಾತನಾಡಿದರು.   

ಅಳವಂಡಿ: ಜಾತಿ, ಬೇಧ ಬಿಟ್ಟು ಎಲ್ಲರೂ ಮನುಷ್ಯರೆಂಬ ಭಾವನೆ ಬೆಳೆಸಿಕೊಳ್ಳಬೇಕು. ಎಲ್ಲರಿಗೂ ಹೋಟೆಲ್, ಅಂಗಡಿ, ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶಿಸಲು ಮುಕ್ತ ಅವಕಾಶ ಇದೆ. ಗ್ರಾಮಗಳಲ್ಲಿ ಅಸ್ಪೃಶ್ಯತಾ ಆಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದ್ದು, ನಿವಾರಣೆ ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕಿಶೋರ್ ವಿಕಾಸ ಸುರಳ್ಕರ್‌ ಹೇಳಿದರು.

ತಿಗರಿ ಗ್ರಾಮದಲ್ಲಿ ತಾಲೂಕು ಆಡಳಿತ, ತಾಲ್ಲೂಕ ಪಂಚಾಯಿತಿ, ಪೋಲಿಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಸ್ಪೃಶ್ಯತಾ ನಿವಾರಣೆ ಕುರಿತು ಶುಕ್ರವಾರ ನಡೆದ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪೋಲಿಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಮಾತನಾಡಿ, ಎಲ್ಲರಿಗೂ ಸಂವಿಧಾನ ಸಮಾನ ಹಕ್ಕು ನೀಡಿದೆ. ಹಾಗಾಗಿ ಜಾತಿ ಮತ, ಮೇಲು ಕೀಳು ಎಂಬ ಭಾವನೆ ತೊಲಗಲಿ. ನಾವೆಲ್ಲ ಮನುಷ್ಯರೆಂಬ ಭಾವನೆ ಮೊಳಗಬೇಕು. ಎಲ್ಲಾ ಸಮುದಾಯಗಳನ್ನು ಗೌರವಿಸಿ ಒಗ್ಗಟ್ಟಿನಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮದಲ್ಲಿ ಪ್ರತಿಯೊಬ್ಬರೂ ಶಾಂತಿ , ಸಹಬಾಳ್ವೆ, ಸಮಾನತೆ,ಸಹೊದರತ್ವ ಗುಣದಿಂದ ಬಾಳೋಣ ಎಂದರು.

ADVERTISEMENT

ಸಿಇಒ ಪೌಜಿಯಾ ತರುನ್ನುಮ ಮಾತನಾಡಿ, ಗಾಂಧೀಜಿ ಕನಸು ನನಸಾಗಿಸಲು ಎಲ್ಲರೂ ಒಂದೇ ಭಾವನೆಯಿಂದ ಜೀವನ ನಡೆಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಜಾತಿ, ಮತ, ಬೇಧ ಬಿಟ್ಟು ಸಹಬಾಳ್ವೆಯಿಂದ ಬಾಳೋಣ ಎಂದರು.

ಗ್ರಾ.ಪಂ ಅಧ್ಯಕ್ಷೆ ರೇಣುಕಾ ಹರಿಜನ, ತಹಶೀಲ್ದಾರ್ ಅಮರೇಶ ಬಿರಾದಾರ್, ಡಿವೈಎಸ್ಪಿ ಗೀತಾ, ತಾ.ಪಂ ಇಒ ಮಲ್ಲಿಕಾರ್ಜುನ, ಸಿಡಿಪಿಒ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಶ್ರೀಧರ್, ಆರ್. ಐ. ಶ್ರೀನಾಥ್ ಜೋಶಿ, ಗ್ರಾಮ ಲೆಕ್ಕಾಧಿಕಾರಿ ಸುಪ್ರೀತಾ, ಪಿಡಿಒ ಅಕ್ಬರ್, ಮುಖಂಡರಾದ ಹನುಮನಗೌಡ , ಸತ್ಯನಾರಾಯಣರಾವ್, ರಾಮಣ್ಣ ಬಿಸರಳ್ಳಿ, ಶಂಕರ ಅಂಬಳಿ, ಗಣೇಶ ಪೂಜಾರ್, ಸಂಗಪ್ಪ ಕವಲೂರು, ಮುದಿಯಪ್ಪ ಅಡವಳ್ಳಿ, ಭೀಮನಗೌಡ, ದೇವಪ್ಪ ಹರಿಜನ, ದುರುಗಪ್ಪ ಹರಿಜನ , ಹನುಮಂತ, ಮಾರುತಿ, ಬಸವನಗೌಡ, ಮಹೇಶ, ಈರಪ್ಪ, ಕೋಟ್ರಪ್ಪ, ಮಹೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.