ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 14:26 IST
Last Updated 5 ಜೂನ್ 2020, 14:26 IST
ಗಂಗಾವತಿಯ ಹೇಮಗುಡ್ಡ ಗ್ರಾಮದ ಬಳಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಚಿರತೆ ಸಾವನ್ನಪ್ಪಿತು
ಗಂಗಾವತಿಯ ಹೇಮಗುಡ್ಡ ಗ್ರಾಮದ ಬಳಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಚಿರತೆ ಸಾವನ್ನಪ್ಪಿತು   

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಹೇಮಗುಡ್ಡ ಗ್ರಾಮದ ಬಳಿ ಶುಕ್ರವಾರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹೆಣ್ಣು ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆಯಿತು.

ಗಂಗಾವತಿ -ಕೊಪ್ಪಳ ರಾಜ್ಯ ಹೆದ್ದಾರಿ ದಾಟಿ ಬಂದಿದ್ದ ಗ್ರಾಮಕ್ಕೆ ಬಂದಿದ್ದ ಚಿರತೆಯು ನಾಯಿಯ ಮೇಲೆ ದಾಳಿ ನಡೆಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ವಾಹನ ಡಿಕ್ಕಿ ಹೊಡೆದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.