ADVERTISEMENT

ಯಲಬುರ್ಗಾ: ಚಿಕಿತ್ಸೆಯಿಂದ ಕುಷ್ಠರೋಗ ಗುಣಮುಖ

ಆರೋಗ್ಯ ಸುರಕ್ಷಣಾಧಿಕಾರಿ ವಿದ್ಯಾಶ್ರೀ ಕುಡಗುಂಟಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 6:03 IST
Last Updated 7 ಫೆಬ್ರುವರಿ 2022, 6:03 IST
ಯಲಬುರ್ಗಾ ತಾಲ್ಲೂಕು ಗೆದಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕುಷ್ಠರೋಗ ಜಾಗೃತಿ ಅಭಿಯಾನದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು
ಯಲಬುರ್ಗಾ ತಾಲ್ಲೂಕು ಗೆದಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕುಷ್ಠರೋಗ ಜಾಗೃತಿ ಅಭಿಯಾನದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು   

ಯಲಬುರ್ಗಾ: ತಾಲ್ಲೂಕಿನ ಗೆದಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಪರ್ಶ ಕುಷ್ಠರೋಗ ಕುರಿತ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ವಿದ್ಯಾಶ್ರೀ ಕುಡಗುಂಟಿ ಮಾತನಾಡಿ,‘ಸೂಕ್ತ ಚಿಕಿತ್ಸೆ ಪಡೆದರೆ ಕುಷ್ಠರೋಗದಿಂದ ಗುಣಮುಖರಾಗಬಹುದು. ಇದರ ಬಗ್ಗೆ ಜನರಲ್ಲಿ ಸಾಕಷ್ಟು ತಪ್ಪು ಕಲ್ಪನೆಗಳಿವೆ. ಕರ್ನಾಟಕವನ್ನು ಕುಷ್ಠರೋಗ ಮುಕ್ತ ರಾಜ್ಯವನ್ನಾಗಿ ಮಾಡುವ ಸರ್ಕಾರದ ಸಂಕಲ್ಪಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.

ಸಮುದಾಯ ಆರೋಗ್ಯ ಅಧಿಕಾರಿ ಶ್ರೀದೇವಿ ತೋಟದ ಮಾತನಾಡಿ,‘ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಪ್ರಯುಕ್ತ ರಾಷ್ಟ್ರೀಯ ಕುಷ್ಠರೋಗ ದಿನಾಚರಣೆ ಆಚರಿಸುತ್ತಿರುವ ಕಾರಣ ಫೆ.13ರವರೆಗೆ ಜಾಗೃತಿ ಅಭಿಯಾನದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದರು. ವ್ಯಕ್ತಿಯ ದೇಹದ ಮೇಲೆ ತಿಳಿ ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರದ ಸಹಾಯಕ, ಸಹಾಯಕಿಯರ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಹಾಗೂ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರತಿಜ್ಞಾವಿಧಿ ಬೊಧಿಸಲಾಯಿತು.

ADVERTISEMENT

ಶಾಲೆಯ ಮುಖ್ಯೋಪಾಧ್ಯಯ ನಾಗಭೂಷಣ ಚಿನಿವಾಲರ, ದೇವಪ್ಪ ಮುಗಳಿ, ಗಣೇಶ ರಾಠೋಡ, ಸಂಗಮೇಶ, ಮಲ್ಲನಗೌಡ, ಮಲ್ಲಿಕಾರ್ಜುನ ಚಿಕ್ಕೊಡಿ, ಹನಮೇಶ ಹರಿಜನ, ಆಶಾ ಕಾರ್ಯಕರ್ತೆ ಭಾಗ್ಯಶ್ರೀ ಗೊಲ್ಲರ ಹಾಗೂ ಜಯಶ್ರೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.