ADVERTISEMENT

ಕೋವಿಡ್ ಜಾಗೃತಿ ಜಾಥಾ: ಮಾರ್ಗಸೂಚಿ ಪಾಲಿಸೋಣ

ತಾಲ್ಲೂಕಿನಾದ್ಯಂತ ಮಾಸ್ಕ್ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 4:08 IST
Last Updated 19 ಜೂನ್ 2021, 4:08 IST
ಕುಕನೂರು ಪಟ್ಟಣ ಪಂಚಾಯಿತಿ ವತಿಯಿಂದ ಕೋವಿಡ್‌ ಜಾಗೃತಿ ಜಾಥಾ ನಡೆಯಿತು
ಕುಕನೂರು ಪಟ್ಟಣ ಪಂಚಾಯಿತಿ ವತಿಯಿಂದ ಕೋವಿಡ್‌ ಜಾಗೃತಿ ಜಾಥಾ ನಡೆಯಿತು   

ಕುಕನೂರು: ‘ಕೋವಿಡ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಚರಿಸುತ್ತಿರುವ ಮಾಸ್ಕ್ ದಿನಾಚರಣೆಯು ಬದಲಾದ ಕಾಲಮಾನದ ಮತ್ತು ಅವಶ್ಯಕತೆಯ ಸಂಕೇತ. ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ತಡೆಯೋಣ’ ಎಂದು ಪಟ್ಟಣ ಪಂಚಾಯಿತಿ ಸಿಬ್ಬಂದಿ ಬಸಯ್ಯ ಪೊಲೀಸ್ ಪಾಟೀಲ ಹೇಳಿದರು.

ಪಟ್ಟಣ ಪಂಚಾಯಿತಿ ವತಿಯಿಂದ ಶುಕ್ರವಾರ ಇಲ್ಲಿ ನಡೆದ ಮಾಸ್ಕ್ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರು ಎಲ್ಲೆಂದರಲ್ಲಿ, ಕಟ್ಟೆಗಳ ಮೇಲೆ ಗುಂಪಾಗಿ ಕುಳಿತು ಚರ್ಚಿಸುವುದು, ಒಟ್ಟಾಗಿ ಕುಳಿತುಕೊಳ್ಳುವುದು ಮಾಡುತ್ತಿದ್ದಾರೆ. ಈ ರೀತಿ ನಡೆದುಕೊಳ್ಳುವುದು ಅವರ ಜೀವಕ್ಕೆ ಅಪಾಯ ಎನ್ನುವ ಸಂದೇಶವನ್ನು ಅವರಿಗೆ ತಲುಪಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಜೀವನ ನಿರ್ವಹಿಸಬೇಕು ಎಂದು ತಿಳಿಸಬೇಕು ಎಂದರು.

ADVERTISEMENT

ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು, ಆಗಾಗ್ಗೆ ಕೈತೊಳೆದುಕೊಳ್ಳುವ ಮೂಲಕ ಕೊರೊನಾ ಸೋಂಕಿನ ವಿರುದ್ಧ ಜಯ ಸಾಧಿಸಬಹುದು ಎನ್ನುವ ಸಂದೇಶವನ್ನು ತಲುಪಿಸುವುದೇ ಮಾಸ್ಕ್ ದಿನಾಚರಣೆಯ ಉದ್ದೇಶ ಎಂದು ತಿಳಿಸಿದರು.

ಪ್ರಕಾಶ್ ಬಂಡಿ , ಶ್ರೀಕಾಂತ್ ಬಾರಿಗಿಡದ, ವೇದಾವತಿ, ಎಂ.ಡಿ ರಾಜೇಶ್ವರಿ ಜಗದೀಶ ಚಲವಾದಿ, ಮಂಜುನಾಥ್ ಪೊಲೀಸ್ ಪಾಟೀಲ, ಮನೋಹರ ಹಾಗೂ ಪೌರ ಕಾರ್ಮಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.