ADVERTISEMENT

ಲಾಕ್‍ಡೌನ್: ಖರೀದಿಗೆ ಮುಗಿಬಿದ್ದ ಜನ

​ಪ್ರಜಾವಾಣಿ ವಾರ್ತೆ
Published 10 ಮೇ 2021, 5:43 IST
Last Updated 10 ಮೇ 2021, 5:43 IST
ಗಂಗಾವತಿಯಲ್ಲಿ ಜನ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು
ಗಂಗಾವತಿಯಲ್ಲಿ ಜನ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು   

ಗಂಗಾವತಿ: ಕೊರೊನಾ ಸೋಂಕು ನಿಯಂತ್ರಣ ಮಾಡಲು ಜನತಾ ಕರ್ಫ್ಯೂ ಜಾರಿ ಮಾಡಿದ್ದರೂ ಅದನ್ನು ಲೆಕ್ಕಿಸದೇ ಜನರು ಭಾನುವಾರ ಗುಂಪು ಗುಂಪಾಗಿ ವಸ್ತುಗಳ ಖರೀದಿಗೆ ಮುಂದಾದರು.

ಕಳೆದ 10 ದಿನಗಳಿಂದ ಕರ್ಫ್ಯೂ ಜಾರಿ ಮಾಡಲಾಗಿತ್ತು. ಆದರೂ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ರಾಜ್ಯ ಸರ್ಕಾರ ಮೇ 10 ರಿಂದ 14 ದಿನಗಳವರೆಗೆ ಲಾಕ್‍ಡೌನ್ ಘೋಷಣೆ ಮಾಡಿದೆ. ಹಾಗಾಗಿ ಜನರು ಭಾನುವಾರ ವಸ್ತುಗಳ ಖರೀದಿಗೆ ಮುಗಿಬಿದ್ದರು. ಬೆಳಗಿನ ಜಾವದಿಂದಲೇ ಜನರು ವ್ಯಾಪಾರ ಮಾಡಲು ಹೊರಗಡೆ ಬಂದಿದ್ದಾರೆ. ಭಯವಿಲ್ಲದೆ ಗುಂಪು ಗುಂಪಾಗಿ ತಿರುಗಾಡಿಕೊಂಡು ಖರೀದಿ ಮಾಡಿದ್ದಾರೆ. ಪೊಲೀಸ್ ಇಲಾಖೆಯವರು ಜನರ ಗುಂಪು ಚದುರಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT