ಗಂಗಾವತಿ: ನಗರಸಭೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಲಾಕ್ಡೌನ್ ನಡುವೆಯೂ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಕಾರಣ ಅಂಗಡಿಯೊಂದನ್ನು ಜಪ್ತಿ ಮಾಡಿದರು.
ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ,‘ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಅನಗತ್ಯವಾಗಿ ಓಡಾಡುವಂತಿಲ್ಲ. ವ್ಯಾಪಾರಿಗಳೂ ವ್ಯಾಪಾರ ಮಾಡುವಂತಿಲ್ಲ. ಆದರೆ ನಗರದಲ್ಲಿರುವ ಬಟ್ಟೆ ಅಂಗಡಿಯವರು ಕದ್ದು-ಮುಚ್ಚಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ದೂರುಗಳು ಬಂದಿದ್ದವು. ಹಾಗಾಗಿ ಏಕಾಏಕಿ ದಾಳಿ ನಡೆಸಲಾಯಿತು. ಆರಾಧನಾ ಬಟ್ಟೆ ಅಂಗಡಿಯಲ್ಲಿ ಮಾಲೀಕರು ವ್ಯಾಪಾರ ನಡೆಸುತ್ತಿರುವುದು ಕಂಡುಬಂತು. ಅಂಗಡಿ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.
ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ನಗರಸಭೆ ಸಿಬ್ಬಂದಿ ನಾಗರಾಜ, ಪರಶುರಾಮ ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.