ಕೊಪ್ಪಳ: ಕುಕನೂರು ತಾಲ್ಲೂಕಿನ ಬೆಣಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೃಷ್ಣರಡ್ಡಿ ಭಾವಿಕಟ್ಟಿ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಣಕಲ್ ಗ್ರಾಮದ ಕೊಟ್ರೇಶ್ ಗೊನ್ನಿ ಎಂಬುವವರು ತಮ್ಮ ಜಮೀನಿನ ಅಭಿವೃದ್ಧಿಗಾಗಿ ಫಾರಂ 9/11 ನೀಡುವಂತೆ ಕೃಷ್ಣರೆಡ್ಡಿ ಬಳಿ ಹೋದಾಗ ₹50 ಸಾವಿರ ಲಂಚ ನೀಡುವಂತೆ ಕೇಳಿದ್ದರು. ಚೌಕಾಸಿ ಮಾಡಿದ ಬಳಿಕ ₹40 ಸಾವಿರಕ್ಕೆ ಒಪ್ಪಿಕೊಂಡಿದ್ದರು. ಪಿಡಿಒ ಖಾಸಗಿ ವ್ಯಕ್ತಿಯ ಮೂಲಕ ಲಂಚ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.