ಕುಷ್ಟಗಿ: ತಾಲ್ಲೂಕಿನ ಮೆಣೆದಾಳ ಗ್ರಾಮದ 2ನೇ ವಾರ್ಡ್ನಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ವೀರಭದ್ರಪ್ಪ ಮೆಂಟಗೇರಿ (55) ಶನಿವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕೆಲ ದಿನಗಳ ಹಿಂದೆಪಾರ್ಶ್ವವಾಯು ಕಾಣಿಸಿಕೊಂಡ ಕಾರಣ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅವರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ವೀರಭದ್ರಪ್ಪ ಮೆಂಟಗೇರಿ ಸೇರಿ ಸಾಮಾನ್ಯ ಕ್ಷೇತ್ರದಲ್ಲಿ ಒಟ್ಟು ಮೂವರು ಕಣದಲ್ಲಿದ್ದರು. ಅದೇ ವಾರ್ಡ್ನ ಪರಿಶಿಷ್ಟ ಪಂಗಡ ಮಹಿಳಾ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದಾರೆ.
ತಹಶೀಲ್ದಾರ್ ಎಂ.ಸಿದ್ದೇಶ್ ಮಾತನಾಡಿ, ‘ಡಿ.27 ರಂದು (ಭಾನುವಾರ) ನಿಗದಿಯಂತೆ ಮತದಾನ ನಡೆಯಲಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.