ADVERTISEMENT

ದಢೇಸಗೂರ ‌ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಎಂ.ಬಿ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 8:44 IST
Last Updated 5 ಸೆಪ್ಟೆಂಬರ್ 2022, 8:44 IST
ಎಂ.ಬಿ.ಪಾಟೀಲ್
ಎಂ.ಬಿ.ಪಾಟೀಲ್   

ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಢೇಸಗೂರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಗ್ರಹಿಸಿದರು.

ಸೋಮವಾರ ಆಯೋಜನೆಯಾಗಿದ್ದ ಜಿಲ್ಲೆಯ ಕಾಂಗ್ರೆಸ್ ಹಾಲಿ,‌ ಮಾಜಿ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಅವರು ಇಲ್ಲಿಗೆ ಬಂದಿದ್ದಾರೆ.

ಈ ವೇಳೆ ಮಾತನಾಡಿ, ಹಣವನ್ನು ಸರ್ಕಾರಕ್ಕೆ ಕೊಟ್ಟಿದ್ದೇನೆ ಎನ್ನುವ ಮಾತು ಆಡಿಯೊದಲ್ಲಿದೆ. ಸರ್ಕಾರ ಅಂದರೆ ಯಾರ ಕೈಯಲ್ಲಿ ಹಣ ಕೊಟ್ಟಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಶಾಸಕರ ಹೇಳಿಕೆ ಗಮನಿಸಿದರೆ ಪೂರ್ಣ ಸರ್ಕಾರವೇ ಹಗರಣದಲ್ಲಿ ಭಾಗಿಯಾದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಹಗರಣ ಬಗ್ಗೆ ಸಂಪೂರ್ಣ ಪಾರದರ್ಶಕ ತನಿಖೆ ನಡೆಯಬೇಕು. ಎನೂ ತಪ್ಪು ಮಾಡದ ಅಭ್ಯರ್ಥಿಗಳು ಇದ್ದು, ಅವರಿಗೆ ನ್ಯಾಯ ಸಿಗಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.