ADVERTISEMENT

ಗವಿಸಿದ್ದೇಶ್ವರ ಮಹಾರಥೋತ್ಸವ: ಅಜ್ಜನ ಜಾತ್ರೆಗೆ ಜನಸಾಗರ

​ಪ್ರಜಾವಾಣಿ ವಾರ್ತೆ
Published 8 ಜನವರಿ 2023, 15:36 IST
Last Updated 8 ಜನವರಿ 2023, 15:36 IST
ಮಹಾರಥೋತ್ಸವದಲ್ಲಿ ಪಾಲ್ಗೊಂಡ ಲಕ್ಷಾಂತರ ಭಕ್ತರು
ಮಹಾರಥೋತ್ಸವದಲ್ಲಿ ಪಾಲ್ಗೊಂಡ ಲಕ್ಷಾಂತರ ಭಕ್ತರು   

ಕೊಪ್ಪಳ: ಇಲ್ಲಿನ ಗವಿಮಠದ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದಾರೆ.

ರಥೋತ್ಸವ ಸಂಜೆ ಇದ್ದರೂ ಭಾನುವಾರ ಬೆಳಗಿನ‌ ಜಾವದಿಂದಲೇ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಸರಿಯಾಗಿ ಆರು ಗಂಟೆಗೆ ರಥೋತ್ಸವ ಜರುಗಲಿದ್ದು, ಜನಸಂದಣಿಯ ಅದ್ಭುತ ವೈಭವ ಕಣ್ಣು ತುಂಬಿಕೊಂಡರು.

ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಸವರಾಜ ರಾಯರಡ್ಡಿ ಸಚಿವರಾದ ಆನಂದ ಸಿಂಗ್, ಹಾಲಪ್ಪ ಆಚಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.