ADVERTISEMENT

ಶಾಸಕ ಗೈರು: ಜನರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 11:16 IST
Last Updated 26 ಜನವರಿ 2022, 11:16 IST

ಕನಕಗಿರಿ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಬುಧವಾರ ನಡೆದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸೂಗೂರು ಅವರು ಗೈರಾಗಿದ್ದರು.

ಕನಕಗಿರಿ ನೂತನ ತಾಲ್ಲೂಕು ಕೇಂದ್ರವಾಗಿ ನಾಲ್ಕು ವರ್ಷಗಳು ಗತಿಸಿದ್ದು, ಶಾಸಕರು ಒಂದೆರಡು ಸಲ ಮಾತ್ರ ಇಲ್ಲಿನ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಹುತೇಕ ನೀರಾವರಿ ಪ್ರದೇಶವಾಗಿರುವ ಕಾರಟಗಿ ತಾಲ್ಲೂಕಿಗೆ ಸೀಮಿತಗೊಂಡಿದ್ದಾರೆ ಎಂದು ಸ್ಥಳೀಯರು ದೂರಿದರು.

ಸತತ ಎರಡು ವರ್ಷಗಳಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿಲ್ಲ. ತಾವೇ ಆಡಿದ ಮಾತನ್ನು ಮರೆತ್ತಿದ್ದಾರೆ.

ADVERTISEMENT

ಪಟ್ಟಣದ 17 ವಾರ್ಡ್‌ಗಳ ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಹ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರಾಗಿದ್ದು ಚರ್ಚೆಗೆ ಗ್ರಾಸವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.