ಯಲಬುರ್ಗಾ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹೊರವಲಯದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಿಳಾ ಕಾರ್ಮಿಕರಿಬ್ಬರು ಭಾನುವಾರ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
6 ಜನರಿದ್ದ ಈ ಗುಂಪಿನಲ್ಲಿ ದೇವಮ್ಮ ಯಮನಪ್ಪ ಮುದೇನೂರು (60) ಹಾಗೂ ರೇಷ್ಮಾ ಕೊಟ್ರೇಶ್ ಛಲವಾದಿ (28) ಮೃತಪಟ್ಟವರು. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ವರದಿ: ಜಿಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ, ಹುಕ್ಕೇರಿ, ಖಾನಾಪುರ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಒಂದು ತಾಸಿಗೂ ಅಧಿಕ ಕಾಲ ಧಾರಾಕಾರಮಳೆಸುರಿಯಿತು.
ಚಿತ್ರದುರ್ಗ ವರದಿ: ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಬಿರುಗಾಳಿ ಸಹಿತಮಳೆಸುರಿಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.